ನವದೆಹಲಿ, ಸೆ 30 (DaijiworldNews/DB): ಎಎಪಿ ನಾಯಕ ರಾಘವ್ ಛಡ್ಡಾ ಅವರ ಬಂಧನಕ್ಕೆ ಎಲ್ಲಾ ತಯಾರಿಗಳು ನಡೆಯುತ್ತಿವೆ. ಛಡ್ಡಾ ಅವರು ಪಕ್ಷದ ಗುಜರಾತ್ ಘಟಕದ ಸಹ ಉಸ್ತುವಾರಿಯಾಗಿ ನೇಮಕವಾಗಿರುವುದೇ ಇದಕ್ಕೆ ಕಾರಣ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಗುಜರಾತ್ನಲ್ಲಿ ಅವರು ಪಕ್ಷದ ಪ್ರಚಾರಗಳಲ್ಲಿಯೂ ಭಾಗವಹಿಸುತ್ತಿದ್ದು, ಮಹತ್ವದ ಜವಾಬ್ದಾರಿಯನ್ನೂ ನಿಭಾಯಿಸಲು ಮುಂದಾಗಿದ್ದಾರೆ. ಹೀಗಾಗಿ ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಕೇಳಲ್ಪಟ್ಟಿದ್ದೇವೆ. ಬಂಧನಕ್ಕೆ ಯಾವ ಮೊಕದ್ದಮೆ ಉಪಯೋಗಿಸಬೇಕು ಮತ್ತು ಯಾವ ಆರೋಪ ಮಾಡಬೇಕೆಂಬ ವಿಚಾರದಲ್ಲಿ ಸದ್ಯ ಕೆಲವರು ಕೆಲಸ ಮಾಡುತ್ತಿದ್ದಾರೆ ಎಂದರು.
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಭರ್ಜರಿ ಗೆಲುವು ದಾಖಲಿಸುವಲ್ಲಿ ರಾಘವ್ ಛಡ್ಡಾ ಅವರ ಪಾತ್ರ ಪ್ರಮುಖವಾಗಿತ್ತು.ದೆಹಲಿ ಅಬಕಾರಿ ನೀತಿಯಲ್ಲಿ ನಡೆಯಲಾಗಿದೆ ಎನ್ನಲಾದ ಹಗರಣ ಸಂಬಂಧಿಸಿ ಎಎಪಿ ಮಾಧ್ಯಮ ಸಂವಹನ ಉಸ್ತುವಾರಿ ವಿಜಯ್ ನಾಯರ್ ಅವರನ್ನು ಮಂಗಳವಾರ ಸಿಬಿಐ ಬಂಧಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೇಜ್ರೀವಾಲ್ ಟ್ವೀಟ್ ಮಾಡಿದ್ದಾರೆ.