ನವದೆಹಲಿ, ಅ 01 (DaijiworldNews/HR): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಈ ಪ್ರಕರಣವನ್ನು ಒಂದು ನ್ಯಾಯಾಲಯದಿಂದ ಇನ್ನೊಂದು ನ್ಯಾಯಾಲಯಕ್ಕೆ ವರ್ಗಾಯಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ನೀಡಿದ ಆದೇಶವನ್ನು ಪ್ರಶ್ನಿಸಿ ಜೈನ್ ಸಲ್ಲಿಸಿದ ಮನವಿಯನ್ನು ನ್ಯಾಯಮೂರ್ತಿ ಯೋಗೇಶ್ ಖನ್ನಾ ವಜಾಗೊಳಿಸಿದ್ದಾರೆ.
ಇನ್ನು ಪ್ರಕರಣವನ್ನು ವರ್ಗಾವಣೆ ಮಾಡುವಾಗ ಜಿಲ್ಲಾ ನ್ಯಾಯಾಧೀಶರು ಎಲ್ಲಾ ಅಂಶಗಳನ್ನು ಪರಿಗಣಿಸಿದ್ದು, ಯಾವುದೇ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.