ನವದೆಹಲಿ, ಅ 02 (DaijiworldNews/HR): ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆ ಪ್ರಕರಣದ ಆರೋಪಿ ದೀಪಕ್ ಅಲಿಯಾಸ್ ಟಿನು ಶನಿವಾರ ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಕೇಂದ್ರೀಯ ತನಿಖಾ ಸಂಸ್ಥೆಯ ಸಿಬ್ಬಂದಿ ರಾತ್ರಿ 11 ಗಂಟೆ ಸುಮಾರಿಗೆ ಆತನನ್ನು ಕರೆದುಕೊಂಡು ಹೋಗುತ್ತಿದ್ದಾಗ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ದೀಪಕ್ ಸಿದ್ದು ಮೂಸೆ ವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಪ್ತ ಸಹಾಯಕನಾಗಿದ್ದ ಎನ್ನಲಾಗಿದ್ದು, ಶೂಟರ್ಗಳು, ಮಾಸ್ಟರ್ಮೈಂಡ್ಗಳು ಮತ್ತು ಕೊಲೆಯಲ್ಲಿ ಭಾಗಿಯಾಗಿರುವ ಇತರರು ಎಂದು ಪಟ್ಟಿ ಮಾಡಲಾದ 15 ಜನರ ಚಾರ್ಜ್ಶೀಟ್ನಲ್ಲಿ ದೀಪಕ್ ಹೆಸರು ಇತ್ತು.