ಮೈಸೂರು, ಅ 03 (DaijiworldNews/MS): ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ರಾಹುಲ್ ಗಾಂಧಿ ಭೇಟಿ ಹಿನ್ನೆಲೆ ಒಂದು ಗಂಟೆಗಳ ಕಾಲ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು.
ರಾಹುಲ್ ಗಾಂಧಿ ಭೇಟಿ ನೀಡಿದ್ದ ವೇಳೆ ಅವರೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ಕಾಂಗ್ರೆಸ್ ನಾಯಕ ವೇಣುಗೋಪಾಲ್ ಸೇರಿ ಹಲವರು ಅವರ ಜತೆಯಲ್ಲಿದ್ದರು.
ಚಾಮುಂಡೇಶ್ವರಿ ದರ್ಶನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ದೇವಸ್ಥಾನ, ಮಸೀದಿ ಹಾಗೂ ಚರ್ಚ್ಗೆ ಸಹ ಭೇಟಿ ಕೊಟ್ಟಿದ್ದಾರೆ