ಹೈದರಾಬಾದ್, ಅ 4 (DaijiworldNews/HR): ತೆಲಂಗಾಣದ ಮುಖ್ಯಮಂತ್ರಿ, ತೆಲಂಗಾಣ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಅವರು ಅಕ್ಟೋಬರ್ 5ರಂದು ತಮ್ಮ ರಾಷ್ಟ್ರೀಯ ಪಕ್ಷದ ಬಗ್ಗೆ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಕುರಿತು ಮಾತನಾಡಿದ ತೆಲಂಗಾಣ ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷ ವಿನೋದ್ ಕುಮಾರ್, ರಾಷ್ಟ್ರೀಯ ಪಕ್ಷದ ಬಗ್ಗೆ ಕೆ.ಸಿ.ಆರ್ ಅವರು ಅ.5ರಂದು ಘೋಷಣೆ ಮಾಡಲಿದ್ದು, ತೆಲಂಗಾಣ ರಾಷ್ಟ್ರೀಯ ಸಮಿತಿಯನ್ನು 'ಭಾರತೀಯ ರಾಷ್ಟ್ರೀಯ ಸಮಿತಿ' ಎಂದು ಬದಲಾವಣೆ ಮಾಡಲಾಗುವುದು ಎಂದರು.
ಇನ್ನು ಬೇರೆ ಪಕ್ಷ ಕಟ್ಟುವುದಿಲ್ಲ. ಆದರೆ ನಮ್ಮದೇ ಪಕ್ಷದಲ್ಲಿ ಬದಲಾವಣೆ ತರಲಿದ್ದೇವೆ ಎಂದಿದ್ದಾರೆ.
ಈಗಾಗಲೇ ಕೆ.ಸಿ.ಆರ್ ಅವರು ಪಕ್ಷದ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿದ್ದಾರೆ.