ನವದೆಹಲಿ, ಅ 4 (DaijiworldNews/HR): ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಸಂಸದ ಸಂಜಯ್ ರಾವುತ್ ಅವರಿಗೆ ಅಕ್ಟೋಬರ್ 10 ರವರೆಗೆ ನ್ಯಾಯಾಂಗ ಬಂಧನವನ್ನು ವಿಶೇಷ ನ್ಯಾಯಾಲಯ ಮಂಗಳವಾರ ವಿಸ್ತರಿಸಿದೆ.
ಪತ್ರಾ ಚಾಲ್ ಮರು ಅಭಿವೃದ್ಧಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯ (ಇಡಿ) ಸಂಜಯ್ ರಾವುತ್ ಅವರನ್ನು ಬಂಧಿಸಿದ್ದು, ಅಂದಿನಿಂದ ಅವರು ಬಂಧನದಲ್ಲಿದ್ದಾರೆ.
ಜುಲೈ 1ರಂದು ರಾವತ್ ಅವರನ್ನು ಸುಮಾರು 10 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದ ಇಡಿ ಈ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ದಾಖಲಿಸಿಕೊಂಡು ಬಳಿಕ ಜುಲೈ 31 ರಂದು ಅವರ ಮನೆಯ ಮೇಲೆ ದಾಳಿ ನಡೆಸಿದ್ದು, ಆಗಸ್ಟ್ 1 ರಂದು ಸಂಜಯ್ ರಾವತ್ ಅವರನ್ನು ಬಂಧಿಸಿತ್ತು.