ತಿರುವನಂತಪುರ, ಅ 4 (DaijiworldNews/HR): ನಾನು ಹಿರಿಯ ನಾಯಕರ ಮತಗಳನ್ನು ನಿರೀಕ್ಷಿಸುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಸಂಸದ ಶಶಿ ತರೂರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಾಮಾನ್ಯ ಮತದಾರರಿಂದ ಬೆಂಬಲ ನಿರೀಕ್ಷಿಸುತ್ತಿದ್ದೇನೆ. ಎರಡು ರಾಜ್ಯಗಳಲ್ಲಿ ಪ್ರಚಾರ ನಡೆಸಿದ ನಂತರ ನನಗೆ ಬರುತ್ತಿರುವ ಕರೆಗಳೂ ಅದೇ ವರ್ಗದ್ದೇ ಆಗಿದೆ ಎಂದರು.
ಇನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣಾ ಕಣದಲ್ಲಿ ಮಲ್ಲಿಕಾರ್ಜುನ ಮತ್ತು ಶಶಿ ತರೂರ್ ಅವರಿದ್ದು, ನೇರ ಹಣಾಹಣಿ ಏರ್ಪಟ್ಟಿದೆ. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅ.19ರಂದು ಫಲಿತಾಂಶ ಹೊರಬೀಳಲಿದೆ.