ಮಂಡ್ಯ, ಅ 06(DaijiworldNews/MS): ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ದ ಮುನಿಸಿಕೊಂಡಿದ್ದ ಹಿರಿಯ ನಾಯಕ ಕೆ.ಹೆಚ್ ಮುನಿಯಪ್ಪ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಹುಟ್ಟಿಸಿದ್ದಾರೆ.
ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಸಂಸದ ಕೆ.ಎಚ್. ಮುನಿಯಪ್ಪರನ್ನು ಕಂಡ ರಾಹುಲ್ ಗಾಂಧಿ ಹೆಗಲ ಮೇಲೆ ಕೈ ಹಾಕಿಕೊಂಡು ಹೆಜ್ಜೆ ಹಾಕಿದರು.
ರಾಜ್ಯ ನಾಯಕರ ವಿರುದ್ದ ಸಿಟ್ಟಾಗಿದ್ದ ಮುನಿಯಪ್ಪ ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷ ಸೇರುತ್ತಾರೆ ಎಂಬ ಸುದ್ದಿ ಹರಡಿತ್ತು. ಮುನಿಯಪ್ಪ ಈ ನಡೆ ಹೊಸ ಲೆಕ್ಕಚಾರ ಹುಟ್ಟುಹಾಕಿ ಬಿಜೆಪಿ ಮತ್ತು ಜೆಡಿಎಸ್ ತಂತ್ರಕ್ಕೆ ಹಿನ್ನಡೆಯುಂಟು ಮಾಡಿದೆ. ಇತ್ತೀಚೆಗೆ ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂದು ಬಹಿರಂಗವಾಗಿಯೇ ಕೆ.ಹೆಚ್ ಮುನಿಯಪ್ಪ ಕಾಂಗ್ರೆಸ್ ವಿರುದ್ದ ಅಸಮಾಧಾನ ಹೊರ ಹಾಕಿದ್ದರು.