ಬೆಂಗಳೂರು, ಅ 06(DaijiworldNews/MS): ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ' ಯಾತ್ರೆಯೂ ಕರ್ನಾಟಕ ಕಾಂಗ್ರೆಸ್ ಗೆ ಹೊಸ ಹುರುಪು ತುಂಬಿದೆ.
ರಾಜ್ಯದಲ್ಲಿ ಐಕ್ಯತಾ ಯಾತ್ರೆಗೆ ಉತ್ತಮ ಜನಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನಲೆ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದ್ದು ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗಲೂ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ ಎಂದು ಹೇಳಿದೆ.
‘ಇಂದಿರಾ ಗಾಂಧಿಯವರ ರಾಜಕೀಯ ಜೀವನದಲ್ಲಿ ಮಹತ್ತರ ಶಕ್ತಿ ತುಂಬಿದ್ದು ಕರ್ನಾಟಕದ ಚಿಕ್ಕಮಗಳೂರು. ಸೋನಿಯಾ ಗಾಂಧಿಯವರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದು ಬಳ್ಳಾರಿ’ ಎಂದು ತಿಳಿಸಿದೆ.
"ಐತಿಹಾಸಿಕ ಕ್ಷಣ"ಇದಾಗಿದ್ದು ಭಾರತ ಐಕ್ಯತಾ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರು ಹೆಜ್ಜೆ ಹಾಕಿದರು,ಭವ್ಯ ಭಾರತದೆಡೆಗೆ ಅವರಿಗಿರುವ ಪ್ರೀತಿ, ಅಭಿಮಾನ, ಬದ್ಧತೆಗಳಿಗೆ ವಯಸ್ಸು, ಆಯಾಸ, ಅನಾರೋಗ್ಯ ಯಾವುದೂ ಅಡ್ಡಿಯಾಗುವುದಿಲ್ಲ. ಅನಾರೋಗ್ಯದಲ್ಲೂ ಅವರ ಈ ಉತ್ಸಾಹವು ಎಲ್ಲರಿಗೂ ಪ್ರೇರಕ ಶಕ್ತಿಯಾಗಿದೆ ಎಂದು ಹೇಳಿದೆ.
ಸೋನಿಯಾ ಗಾಂಧಿಯವರ ಈ ಪ್ರತಿ ಹೆಜ್ಜೆಗಳಲ್ಲೂದೃಢತೆ ವಿಶ್ವಾಸ, ತಾಳ್ಮೆ ಛಲ, ಬದ್ಧತೆ ,ಸ್ಪಷ್ಟತೆ ,ತ್ಯಾಗ,ವಾತ್ಸಲ್ಯ,ಕರುಣೆ ಇದೆ,ತಾಯ್ತನದ ಮಮತೆ ಇದೆ,ದೇಶದೆಡೆಗೆ ಅಪರಿಮಿತ ಪ್ರೇಮವಿದೆ, ಅವಮಾನಗಳನ್ನು ಸಹಿಸುವ ಪ್ರಬುದ್ಧತೆ ಇದೆ ಎಂದು ಹೇಳಿದೆ.