ನವದೆಹಲಿ, ಅ 07 (DaijiworldNews/HR): ಒಂದೇ ದೇಶದಲ್ಲಿ ಎರಡು ಭಾರತವನ್ನು ಕಾಣುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ರೈತರು ಹಾಗೂ ಬಂಡವಾಳಶಾಹಿಗಳಿಗೆ ಸಾಲ ನೀಡುವ ವಿಚಾರದಲ್ಲಿ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದ್ದು, ಒಂದೇ ದೇಶದಲ್ಲಿ ಎರಡು ಭಾರತವನ್ನು ಕಾಣುತ್ತಿದ್ದೇವೆ ಎಂದು ಆರೋಪಿಸಿದ್ದಾರೆ.
ಇನ್ನು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ದೇಶದಾದ್ಯಂತ ಭಾರತ್ ಜೋಡೊ ಯಾತ್ರೆ ಆರಂಭಿಸಿದ್ದು, ಸೆಪ್ಟೆಂಬರ್ 7ರಿಂದ ಯಾತ್ರೆ ಆರಂಭವಾಗಿದ್ದು, ಇದು 150 ದಿನ ನಡೆಯಲಿದೆ.