ಗಾಂಧಿನಗರ, ಅ 07 (DaijiworldNews/HR): ಅಕ್ಟೋಬರ್ 6ರಂದು ವಂದೇ ಭಾರತ್ ರೈಲಿಗೆ ಢಿಕ್ಕಿಯಾಗಿ ಹಾನಿಯಾಗಲು ಕಾರಣವಾಗಿದ್ದ ಎಮ್ಮೆಗಳ ಮಾಲೀಕರ ವಿರುದ್ಧ ರೈಲ್ವೆ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ಸೆಪ್ಟೆಂಬರ್ 30 ರಂದು ಲೋಕಾರ್ಪಣೆ ಗೊಳಿಸಲಾಗಿದ್ದ ಮುಂಬಯಿ ಸೆಂಟ್ರಲ್-ಗಾಂಧಿನಗರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಗೈರತ್ಪುರ ಮತ್ತು ವತ್ವಾ ನಿಲ್ದಾಣಗಳ ನಡುವೆ ಸಂಚರಿಸುತ್ತಿದ್ದಾಗ ಎಮ್ಮೆಗಳ ಹಿಂಡು ಢಿಕ್ಕಿಯಾಗಿ ರೈಲಿನ ಮುಂಭಾಗಕ್ಕೆ ಹಾನಿಯಾಗಿ ನಾಲ್ಕು ಎಮ್ಮೆಗಳು ಸಾವನ್ನಪ್ಪಿದ್ದವು.
ಇನ್ನು ಎಮ್ಮೆಗಳ ಅಪರಿಚಿತ ಮಾಲೀಕರ ವಿರುದ್ಧ ರೈಲ್ವೆ ಕಾಯಿದೆ, 1989 ರ ಸೆಕ್ಷನ್ 147 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.