ವಾರಣಾಸಿ, ಅ 07 (DaijiworldNews/HR): ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿದೆ ಎನ್ನಲಾದ ಶಿವಲಿಂಗದ ವೈಜ್ಞಾನಿಕ ತನಿಖೆ ನಡೆಸುವಂತೆ ಕೋರಿ ಭಕ್ತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಾರಣಾಸಿ ನ್ಯಾಯಾಲಯ ಅ.11ಕ್ಕೆ ಮುಂದೂಡಿದೆ.
ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ ಅವರು ಅಂಜುಮನ್ ಇಸ್ಲಾಮಿಯಾ ಮಸೀದಿ ಸಮಿತಿಯ ವಾದವನ್ನು ಆಲಿಸಿದ ಬಳಿಕ ವಿಚಾರಣೆಯನ್ನು ಅಕ್ಟೋಬರ್ 11ಕ್ಕೆ ಮುಂದೂಡಿದ್ದಾರೆ.
ಇನ್ನು ಸಿಪಿಸಿಯ ಆದೇಶ 26 ನಿಯಮ 10ಎ ಅಡಿಯಲ್ಲಿ ನಾಲ್ವರು ವಾದಿಗಳು ಅರ್ಜಿ ಸಲ್ಲಿಸಿದ್ದು, ಇದು ವೈಜ್ಞಾನಿಕ ತನಿಖೆಗಾಗಿ ಆಯೋಗವನ್ನು ಹೊರಡಿಸುವ ಅಧಿಕಾರವನ್ನು ನ್ಯಾಯಾಲಯಕ್ಕೆ ಒದಗಿಸುತ್ತದೆ.