ಬೆಂಗಳೂರು, ಅ 08 (DaijiworldNews/HR): ನನ್ನ ಕಣ್ಣ ಮುಂದೆ ಜೆಡಿಎಸ್ ಪಕ್ಷವು ಅಧಿಕಾರಕ್ಕೆ ಬರುವುದು ನಿಶ್ಚಿತ. ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನನಗೆ ಇನ್ನು ಹೋರಾಟ ಮಾಡುವ ಶಕ್ತಿಯಿದೆ. ಕುಮಾರಸ್ವಾಮಿ ನಮ್ಮ ಪಕ್ಷವನ್ನು ಉಳಿಸಲು 10 ವರ್ಷಗಳಿಂದ ಯಾವ ಕಾರ್ಯಕ್ರಮ ಮಾಡಿದ್ದಾರೆ ಎಂಬುದು ಗೊತ್ತಿದೆ. ಆದರೆ ಈಗ ಹಿಂದಿನ ವಿಚಾರಗಳನ್ನು ಮಾತನಾಡಲು ನಾನು ಇಷ್ಟ ಪಡುವುದಿಲ್ಲ. ನಾನು ಮುಂಬರುವ ಕಾರ್ಯಕಾರಣಿ ಸಭೆಯಲ್ಲೂ ಭಾಗಿಯಾಗುತ್ತೇನೆ ಎಂದರು.
ನನ್ನ ಆರೋಗ್ಯ ಇನ್ನೂ ಸ್ವಲ್ಪ ಚೇತರಿಸಿಕೊಳ್ಳಬೇಕು. ನಾನು ಈ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡುತ್ತೇನೆ. ನಾವು ನೀವೆಲ್ಲರೂ ಸೇರಿ ಈ ಪಕ್ಷವನ್ನು ಉಳಿಸಬೇಕಿದೆ ದಯವಿಟ್ಟು ಪಕ್ಷಕ್ಕೆ ಶಕ್ತಿ ನೀಡಿ ಎಂದು ಹೇಳಿದ್ದಾರೆ.