ಬೆಂಗಳೂರು, ಅ 09 (DaijiworldNews/HR): ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಮಾದರಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವ ಉದ್ದೇಶವಿಲ್ಲ. ಪರ್ಯಾಯ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದ ಗುಣಮಟ್ಟ ಹೆಚ್ಚಿಸಲು 5 ಮತ್ತು 8 ನೇ ತರಗತಿಗೆ ಪರ್ಯಾಯವಾಗಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆಯಾಗಿದ್ದು, ಇದು ಎಸ್ಎಸ್ಎಲ್ಸಿ ಮಾದರಿಯ ಬೋರ್ಡ್ ಪರೀಕ್ಷೆ ಆಗಿರುವುದಿಲ್ಲ ಎಂದರು.
ಇನ್ನು ಬೋರ್ಡ್ ಪರೀಕ್ಷೆ ಮಾದರಿಯಲ್ಲದೆ ಪರ್ಯಾಯವಾಗಿ ಮಕ್ಕಳ ಕಲಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಯೋಚಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.