ನವದೆಹಲಿ, ಅ 10 (DaijiworldNews/DB): ಪತ್ರಾ ಚಾಲ್ ಭೂಹಗರಣ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯವು ಅಕ್ಟೋಬರ್ 17ರವರೆಗೆ ವಿಸ್ತರಿಸಿ ಆದೇಶಿಸಿದೆ.
ಕಳೆದ ವಾರ ಕೋರ್ಟ್ ಅಕ್ಟೋಬರ್ 10ರವರೆಗೆ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಣೆಗೊಳಿಸಿ ಆದೇಶ ನೀಡಿತ್ತು. ಇಂದು ಮತ್ತೆ ಅಕ್ಟೋಬರ್ 17ರವರೆಗೆ ವಿಸ್ತರಿಸಿ ಆದೇಶಿಸಿದೆ. ಹೀಗಾಗಿ ಅಲ್ಲಿವರೆಗೆ ರಾವುತ್ ಜೈಲಿನಲ್ಲೇ ಕಳೆಯಬೇಕಾಗುತ್ತದೆ.
60 ವರ್ಷದ ಸಂಜಯ್ ರಾವುತ್ ಅವರನ್ನು ಆಗಸ್ಟ್ 1ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಆಗಸ್ಟ್ 8ರಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಲಾಗಿತ್ತು. ಆ ಬಳಿಕ ನ್ಯಾಯಾಂಗ ಬಂಧನದ ಅವಧಿ ಆಗಸ್ಟ್ 30 ರವರೆಗೆ ವಿಸ್ತರಣೆಗೊಂಡಿತ್ತು. ಆನಂತರವೂ ಹಲವು ಬಾರಿ ಅವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಗೊಳಿಸಲಾಗಿತ್ತು.