ಬೆಂಗಳೂರು, ಅ 10 (DaijiworldNews/HR): ಕರ್ನಾಟದಲ್ಲಿ ಎಸಿಬಿ ರದ್ದುಗೊಳಿಸಿ ಹೊರಡಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಕನಕರಾಜು ಎನ್ನುವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಡಿ.ವೈ ಚಂದ್ರಚೂಡ ನೇತೃತ್ವದ ಪೀಠ ಎಸಿಬಿ ರದ್ದು ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.
ಇನ್ನು ಎಸಿಬಿಯಲ್ಲಿದ್ದಅರ್ಜಿಗಳು ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದೆ, ಆದರೂ ಅರ್ಜಿದಾದರಿಗೆ ಅಸಮಾಧಾನ ಏಕೆ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.