ಬಳ್ಳಾರಿ, ಅ 11 (DaijiworldNews/SM): ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ಹಿಂದೆಂದೂ ನೋಡಿಲ್ಲ. ಮೋದಿ ಪ್ರಧಾನಿಯಾದ ಬಳಿಕ ಧರ್ಮ ಆಧಾರಿತ ಜಾತಿ ರಾಜಕಾರಣ ನಡೆಯುತ್ತಿದೆ. ಇದನ್ನು ಪ್ರಶ್ನಿಸಿದರೆ ಕ್ರಿಮಿನಲ್ ಮೊಕದ್ದಮೆ ಹಾಕಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಳ್ಳಾರಿಯಲ್ಲಿ ವಾಗ್ದಾಳಿ ಮಾಡಿದರು.
ಬಳ್ಳಾರಿಯ ಗುರು ಫಂಕ್ಷನ್ ಹಾಲ್ನಲ್ಲಿ ಭಾರತ್ ಜೋಡೋ ಯಾತ್ರೆ ಪೂರ್ವಭಾವಿ ಸಭೆಯನ್ನು ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ವಿರೋಧಿಸಿದರೆ, ಪ್ರಶ್ನಿಸಿದರೆ ಕ್ರಿಮಿನಲ್ ಮೊಕದ್ದಮೆ ಹಾಕುತ್ತಾರೆ. ಸಿಬಿಐ, ಇಡಿ, ಅದಾಯ ತೆರಿಗೆ ಇಲಾಖೆಯ ಮೂಲಕ ಹೆದರಿಸುತ್ತಾರೆ," ಎಂದು ಕಿಡಿಕಾರಿದರು