ಶಿಮ್ಲಾ ಅ 13 (DaijiworldNews/DB): ಪ್ರಧಾನಿ ನರೇಂದ್ರ ಮೋದಿಯವರು ಹಿಮಾಚಲಪ್ರದೇಶಕ್ಕೆ ಭೇಟಿ ನೀಡಿರುವುದು ಕೇವಲ ಚುನಾವಣಾ ಗಿಮಿಕ್ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್ ಹೇಳಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭಯ ಬಿಜೆಪಿಗೆ ಕಾಡುತ್ತಿದೆ. ಈಗಾಗಲೇ ಉಪ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿಗೆ ವಿಧಾನಸಭೆಯಲ್ಲಿಯೂ ನೆಲಕಚ್ಚುವ ಆತಂಕ ಎದುರಾಗಿದೆ. ಹೀಗಾಗಿ ಚುನಾವಣಾ ಗಿಮಿಕ್ ಉದ್ದೇಶದಿಂದ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದವರು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಸೋಲಿಗೆ ಕ್ಷಣಗಣನೆ ಆರಂಭವಾಗಿದೆ. ಹೀಗಾಗಿ ಯೋಜನೆಗಳನ್ನು ತರಾತುರಿಯಲ್ಲಿ ಲೋಕಾರ್ಪಣೆಗೊಳಿಸುತ್ತಿದ್ದಾರೆ. ಅದಕ್ಕಾಗಿ ಪ್ರಧಾನಿ ಮೋದಿಯವರನ್ನು ಕರೆಸುತ್ತಿದ್ದಾರೆ. ಬಿಜೆಪಿಯು ಜನರ ಹಣವನ್ನು ಸಾರ್ವಜನಿಕ ಸಭೆಗಳಿಗಾಗಿ ದುರುಪಯೋಗ ಮಾಡುತ್ತಿದೆ. ಆರ್ಥಿಕ ದಿವಾಳಿತನದ ಅಂಚಿನಲ್ಲಿ ರಾಜ್ಯವನ್ನು ತಂದು ನಿಲ್ಲಿಸಿದ್ದಾರೆ ಎಂದವರು ಆಪಾದಿಸಿದ್ದಾರೆ.