ಬೆಂಗಳೂರು,ಅ 14 (DaijiworldNews/HR): ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಲಿದ್ದು, ಕರ್ನಾಟಕ ಕಾಂಗ್ರೆಸ್ ನಾಯಕರು ಮಲ್ಲಿಕಾರ್ಜುನ ಖರ್ಗೆ ಪರ ಮತಯಾಚನೆ ಆರಂಭಿಸಿದ್ದಾರೆ.
ಕರ್ನಾಟಕದ 479 ಪಿಸಿಸಿ ಪ್ರತಿನಿಧಿಗಳು, ಕಾಂಗ್ರೆಸ್ ಶಾಸಕಾಂಗ ಪಕ್ಷದ 15 ಸದಸ್ಯರು ಈ ಚುನಾವಣೆಯಲ್ಲಿ ಮತ ಹಾಕುವ ಅರ್ಹತೆ ಹೊಂದಿದ್ದು, ಇವರೆಲ್ಲರೂ ಖರ್ಗೆ ಪರ ಮತ ಚಲಾಯಿಸುವಂತೆ ಕಾಂಗ್ರೆಸ್ ಮನವಿ ಮಾಡಿದೆ.
ಇನ್ನು ಮಾಜಿ ಸಚಿವ ಕೃಷ್ಣಪ್ಪ, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ, ಶಾಸಕರಾದ ಹ್ಯಾರಿಸ್, ಬೈರತಿ ಸುರೇಶ್, ಯು.ಬಿ.ವೆಂಕಟೇಶ್, ಶಿವಣ್ಣ ನೇತೃತ್ವದ ಕಾಂಗ್ರೆಸ್ ನಾಯಕರು ಕರ್ನಾಟಕದ ಎಲ್ಲ ಕಾಂಗ್ರೆಸ್ ಸದಸ್ಯರ ಪರ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.