ನವದೆಹಲಿ, ಅ 14 (DaijiworldNews/HR): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ ಅವರು ಅವಧಿಪೂರ್ವ ಬಿಡುಗಡೆಯನ್ನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 17ಕ್ಕೆ ಮುಂದೂಡಿದೆ.
ನಳಿನಿ ಸೇರಿ ಏಳು ಅಪರಾಧಿಗಳು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು, 23 ವರ್ಷದಿಂದ ಜೈಲಿನಲ್ಲಿದ್ದಾರೆ. ಸಮಯದ ಕೊರತೆಯಿಂದ ನ್ಯಾಯಮೂರ್ತಿಗಳು ಇಂದು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಿಲ್ಲ ಎನ್ನಲಾಗಿದೆ.
ಇನ್ನು ತಮಿಳುನಾಡು ಸರ್ಕಾರ ಅವಧಿಪೂರ್ವದಲ್ಲಿ ಬಿಡುಗಡೆ ಮಾಡುವುದರ ಪರವಾಗಿದ್ದು, ಇಂದು ವಿಚಾರಣೆ ನಡೆಸಬೇಕಿದ್ದ ಅರ್ಜಿಯನ್ನು ಸಮಯದ ಕೊರತೆಯಿಂದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಿಲ್ಲ.