ನವದೆಹಲಿ, ಅ 15 (DaijiworldNews/DB): ಘನ ಮತ್ತು ದ್ರವ ತ್ಯಾಜ್ಯದ ಅಸಮರ್ಪಕ ನಿರ್ವಹಣೆಗಾಗಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು 2,900 ಕೋಟಿ ರೂ. ದಂಡ ವಿಧಿಸಿದೆ.
ಘನ ಹಾಗೂ ದ್ರವ ತ್ಯಾಜ್ಯಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ಪರಿಸರ ಹಾನಿ ಉಂಟಾಗಿದೆ. ಹೀಗಾಗಿ ಕರ್ನಾಟಕ ಸರ್ಕಾರ 2,900 ಕೋಟಿ ರೂ. ಪಾವತಿಸಬೇಕು ಎಂದು ಮಂಡಳಿ ಸೂಚಿಸಿದೆ.
ಘನ ಮತ್ತು ದ್ರವ ತ್ಯಾಜ್ಯಗಳ ಅಸಮರ್ಪಕ ನಿರ್ವಹಣೆಗಾಗಿ ಎನ್ಜಿಟಿಯು ಪಶ್ಚಿಮ ಬಂಗಾಳ, ರಾಜಸ್ಥಾನ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್ ಸರ್ಕಾರಗಳಿಗೂ ದಂಡ ವಿಧಿಸಿತ್ತು.