ಶೋಪಿಯಾನ್, ಅ 15 (DaijiworldNews/HR): ಕಾಶ್ಮೀರಿ ಪಂಡಿತರೊಬ್ಬರನ್ನು ಉಗ್ರರು ಗುಂಡಿಕ್ಕಿ ಕೊಂದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದ ಅವರ ನಿವಾಸದ ಬಳಿ ಪುರನ್ ಕ್ರಿಶನ್ ಎಂಬುವವರ ಮೇಲೆ ದಾಳಿ ನಡೆಸಲಾಯಿತು.
ಇನ್ನು ಸದ್ಯ ಆ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ದಾಳಿಕೋರರನ್ನು ಹಿಡಿಯಲು ಶೋಧಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.