ಕೊಚ್ಚಿ, ಅ 15 (DaijiworldNews/MS): ನಾಗರಿಕ ಸಮಾಜವನ್ನೇ ಬೆಚ್ಚಿ ಬೀಳಿಸಿರುವ ಕೇರಳ ನರಬಲಿ ಪ್ರಕರಣದ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ.
ಪಥನಂತಿಟ್ಟಾದಲ್ಲಿ ಮಾಟಮಂತ್ರದ ವಿಧಿವಿಧಾನಗಳಲ್ಲಿ ಇಬ್ಬರು ಮಹಿಳೆಯರನ್ನು ನರಬಲಿಯಾಗಿ ಹತ್ಯೆಗೈಯಲಾಗಿತ್ತು.ಅರ್ಥಿಕ ಏಳಿಗೆಗೆ ನರಬಲಿ ಕೊಟ್ಟಿದ್ದ ಕೇರಳದ ದಂಪತಿ ಭಗವಲ್ ಸಿಂಗ್, ಲೈಲಾ ಮತ್ತು ಮಂತ್ರವಾದಿ ವಿಕೃತಕಾಮಿ ಶಫಿ ಪ್ರಮುಖ ಆರೋಪಿಗಳಾಗಿದ್ದಾರೆ
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಂತ್ರಸ್ತರ ಕುಟುಂಬಗಳಿಗೆ ನೀಡಿದ ಪರಿಹಾರ ಕುರಿತು ಮತ್ತು ತನಿಖೆಯ ಸ್ಥಿತಿಗತಿಯ ಬಗ್ಗೆ ವರದಿಯನ್ನು ನಾಲ್ಕು ವಾರಗಳ ಅವಧಿಯಲ್ಲಿ ಕಳುಹಿಸಿಕೊಡುವಂತೆ ಸೂಚನೆ ನೀಡಿದೆ.
ರಾಜ್ಯ ಸರ್ಕಾರ ಜನರ ರಕ್ಷಣೆಗೆ ಇದೆ. ಅವರ ಸುರಕ್ಷತೆಯ ಜವಾಬ್ದಾರಿಯನ್ನು ಹೊಂದಿದೆ. ಇಂತಹ ಹೀನ ಕೃತ್ಯಗಳಿಂದ ಜನರನ್ನು ರಕ್ಷಿಸುವ ಹೊಣೆಗಾರಿಕೆಯನ್ನು ಸರ್ಕಾರ ಪ್ರದರ್ಶಿಸಬೇಕಿದೆ. ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ