ಪಾಟ್ನಾ, ಅ 17 (DaijiworldNews/MS): ಕೊಲ್ಕತ್ತಾ ಡುರಂಟೋ ಎಕ್ಸ್ ಪ್ರೆಸ್ ರೈಲಿನಲ್ಲಿ ಅಕ್ಟೋಬರ್ 16 ರಂದು ಆಘಾತಕಾರಿ ಘಟನೆ ನಡೆದಿದ್ದು, ಚಲಿಸುತ್ತಿದ್ದ ರೈಲಿಗೆ ನುಗ್ಗಿದ 20 ಕ್ಕೂ ಹೆಚ್ಚು ಶಸ್ತ್ರಸಜ್ಜಿತ ದರೋಡೆಕೋರರ ಗುಂಪು, ದೆಹಲಿ-ಕೋಲ್ಕತ್ತಾದ ದುರಂತೋ ಎಕ್ಸ್ಪ್ರೆಸ್ ರೈಲಿಗೆ ಹತ್ತಿ ಬಂದೂಕು ತೋರಿಸಿ ಪ್ರಯಾಣಿಕರಿಂದ ಹಣ, ಆಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡಲಾಗಿದೆ.
ರೈಲು ಬಿಹಾರದ ಪಾಟ್ನಾವನ್ನು ದಾಟುತ್ತಿದ್ದಾಗ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರೈಲು ಸಂಖ್ಯೆ 12274 ರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ದುಷ್ಕರ್ಮಿಗಳು ಡುರಂಟೋ ಎಕ್ಸ್ ಪ್ರೆಸ್ ರೈಲಿನ ಬೋಗಿ ಏರಿದ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಅಲ್ಲದೆ ಬಳಿಕ ರೈಲು ಚಲಿಸುತ್ತಿರುವಾಗಲೇ ಹಾರಿ ಕತ್ತಲೆಯಲ್ಲಿ ಪರಾರಿಯಾಗಿದ್ದಾರೆ.
ಪಟ್ನಾ ನಿಲ್ದಾಣದಲ್ಲಿ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್ಪಿ) ಸಿಬ್ಬಂದಿ ರೈಲಿನಿಂದ ಇಳಿದಿದ್ದಾರೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.
ಇದನ್ನು ಅನುಸರಿಸಿ, ಯಾರೋ ರೈಲಿನ ತುರ್ತು ಸರಪಳಿಯನ್ನು ಎಳೆದರು ಮತ್ತು ಸುಮಾರು ೨೦ಕ್ಕೂ ಹೆಚ್ಚು ದರೋಡೆಕೋರರು ಹತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕುರಿತಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಈಸ್ಟರ್ನ್ ರೈಲ್ವೆಯ ಸಿಪಿಆರ್ಓ ಬೀರೇಂದ್ರ ಕುಮಾರ್, ಪ್ರಯಾಣಿಕರು ಮಲಗಿದ್ದ ವೇಳೆ ದುಷ್ಕರ್ಮಿಗಳು ಒಳ ಪ್ರವೇಶಿಸಿದ್ದಾರೆ. ಆದರೆ ಈ ಸಂದರ್ಭದಲ್ಲಿ ಗನ್ ಬಳಸಿಲ್ಲ. ಪ್ರಯಾಣಿಕರಿಂದ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದಿದ್ದಾರೆ.