ನವದೆಹಲಿ, ಅ 17 (DaijiworldNews/MS): ದೇಶದ ಚಿತ್ತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯೋ ಚುನಾವಣೆಯತ್ತ ತಿರುಗಿದೆ. ಇಂದು ಎಐಸಿಸಿ ಅಧ್ಯಕ್ಷ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19ರಂದು ಮತ ಎಣಿಕೆಯಾಗಿ ಹೊಸ ಅಧ್ಯಕ್ಷರ ಘೋಷಣೆ ಆಗಲಿದೆ.
ಕಾಂಗ್ರೆಸ್ ಇತಿಹಾಸದಲ್ಲಿ ಆರನೇ ಬಾರಿಗೆ ಅಧ್ಯಕ್ಷೀಯ ಹುದ್ದೆಗಾಗಿ ಚುನಾವಣೆ ನಡೆಯುತ್ತಿದ್ದು, ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೇರಳದ ಶಶಿ ತರೂರ್ ಅವರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಈಗಿನ ಲೆಕ್ಕಾಚಾರದಲ್ಲಿ ರಾಜ್ಯದ ಖರ್ಗೆ ಅವರಿಗೆ ಎಐಸಿಸಿ ಹುದ್ದೆ ಒಲಿಯುವ ಸಾಧ್ಯತೆ ಇದೆ.
ಒಟ್ಟಾರೆ 9000ಕ್ಕೂ ಹೆಚ್ಚು ಪ್ರತಿನಿಧಿಗಳಿದ್ದು ಶೇ. 50ಕ್ಕಿಂತ ಹೆಚ್ಚು ಮತಗಳನ್ನು ಪಡೆದವರು ಅಧ್ಯಕ್ಷ ಪಟ್ಟಕ್ಕೆ ಏರುತ್ತಾರೆ. ಬೆಳಗ್ಗೆ 10ರಿಂದ ಸಂಜೆ4 ರವರೆಗೆ ಚುನಾವಣೆ ನಡೆಯಲಿದೆ.
ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಮತ್ತು ಇತರ 40 ಪಾದಯಾತ್ರಿಗಳು ಬಳ್ಳಾರಿಯಿಂದಲೇ ಮತ ಚಲಾವಣೆ ಮಾಡಲಿದ್ದಾರೆ.