ಬೆಂಗಳೂರು, ಅ 17 (DaijiworldNews/MS): ಮೊದಲು ಹಣ ಪಾವತಿಸಿ ಬಳಿಕ ವಿದ್ಯುತ್ ಬಳಸುವಂತೆ ಮಾಡಲು ರಾಜ್ಯದಲ್ಲಿ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯ ಅಳವಡಿಕೆಗೆ ಇಂಧನ ಇಲಾಖೆ ಸಿದ್ದತೆ ನಡೆಸಿದೆ.
ಎಲ್ಲಾ ಎಸ್ಕಾ ವ್ಯಾಪ್ತಿಯ್ಲೂ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಅಳವಡಿಸುವಂತೆ ಕೇಂದ್ರ ಇಂಧನ ಸಚಿವಾಲಯವು ರಾಜ್ಯ ಸರ್ಕಾರಕ್ಕೆ ಈ ಹಿಂದೆಯೇ ನಿರ್ದೇಶನ ನೀಡಿತ್ತು.. ಈ ಕುರಿತು ರಾಜ್ಯಕ್ಕೆ 2021 ರ ಜುಲೈ 22 ರಂದು ಪತ್ರ ಬರೆದಿದ್ದ ಕೇಂದ್ರ ಇಂಧನ ಸಚಿವಾಲಯ 2023 ರ ಡಿಸೆಂಬರ್ ನೊಳಗೆ ಪ್ರಿಪೇಯ್ಡ್ ಮೀಟರ್ ಅಳವಡಿಸಬೇಕು ಎಂದು ಸೂಚನೆ ನೀಡಿತ್ತು
ಈಗ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಗ್ರಾಹಕರು ಪ್ರತಿ ಸಂಪರ್ಕಕ್ಕೂ ಮೊದಲೇ ನಿರ್ದಿಷ್ಟ ಹಣ ಪಾವತಿಸಿದರಷ್ಟೇ ವಿದ್ಯುತ್ ಸರಬರಾಜಾಗಲಿದೆ. ಪ್ರತಿ ತಿಂಗಳೂ ಈ ರೀತಿ ಮೊದಲೇ ವಿದ್ಯುತ್ ಶುಲ್ಕ ಪಾವತಿಸಬೇಕಾಗುತ್ತದೆ.