ಚೆನ್ನೈ, ಅ 17 (DaijiworldNews/DB): ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಗೆ ಸಹಕರಿಸುವುದೇ ಡಿಎಂಕೆಯ ಪ್ರಮುಖ ಆದ್ಯತೆಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.
ವೀಡಿಯೊ ಸಂದೇಶದಲ್ಲಿ ಮಾತನಾಡಿದ ಅವರು, ತಮಿಳುನಾಡಿನ ಎಲ್ಲಾ 39 ಲೋಕಸಭಾ ಸ್ಥಾನ ಮತ್ತು ಪುದುಚೇರಿಯ ಏಕೈಕ ಸ್ಥಾನದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಮ್ಮ ಗುರಿ. ಇದರೊಂದಿಗೆ ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ಬರಲು ಎಲ್ಲಾ ರೀತಿಯಲ್ಲಿ ಸಹಾಯ ಮಾಡುವುದಾಗಿ ಅವರು ತಿಳಿಸಿದರು.
ಸಾಮಾಜಿಕ ನ್ಯಾಯ ಮತ್ತು ಒಕ್ಕೂಟ ತತ್ವಗಳಿಗೆ ಬದ್ದವಾಗಿರುವ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕು. ಇದಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶ ನಮ್ಮ ಮುಂದಿದೆ. ಇದನ್ನೇ ಗುರಿಯಾಗಿಟ್ಟುಕೊಂಡು ಪಕ್ಷ ರಾಜಕೀಯ ಕ್ರಮಗಳನ್ನು ಅನುಸರಿಸಲಿದೆ. 'ನರ್ಪತುಂ ನಮತೇ, ನಾಡುಂ ನಮತೇ' ಎಂಬ ತಮಿಳು ರಾಜಕೀಯ ಘೋಷಣೆಯೊಂದಿಗೆ ಡಿಎಂಕೆ ಅಧಿಕಾಕ್ಕೇರಿದೆ. ಎಲ್ಲಾ 40 ಲೋಕಸಭಾ ಕ್ಷೇತ್ರಗಳು ನಮ್ಮದೇ, ದೇಶವೂ ನಮ್ಮದೇ ಎಂದೂ ಇದನ್ನು ಅನುವಾದಿಸಬಹುದು ಎಂದರು.