ನವದೆಹಲಿ, ಅ 18 (DaijiworldNews/MS): ಭಾರತ ಮತ್ತು ವಿದೇಶಗಳಲ್ಲಿ ನೆಲೆಸಿರುವ ಭಯೋತ್ಪಾದಕರು, ಮಾಫಿಯಾ ಕುಳ ಮತ್ತು ಮಾದಕ ವಸ್ತು ಸಾಗಣೆದಾರರ ನಡುವೆ ಇರುವ ಸರಪಳಿ ಕತ್ತರಿಸುವ ಉದ್ದೇಶದಿಂದ ರಾಷ್ಟ್ರೀಯ ತನಿಖಾ ಸಂಸ್ಥೆಯು(ಎನ್ಐಎ) ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ದೆಹಲಿ ಎನ್ಸಿಆರ್ ಪ್ರದೇಶಗಳಲ್ಲಿ ದಾಳಿ ನಡೆಸಿದೆ.
ಈ ಹಿಂದೆ ಅಕ್ಟೋಬರ್ 14 ರಂದು, ಡ್ರೋನ್ ನಲ್ಲಿ ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್ಐಎ ಶೋಧ ನಡೆಸಿತ್ತು.