ಕೇದಾರನಾಥ್, ಅ 18 (DaijiworldNews/HR): ಉತ್ತರಾಖಂಡದ ಕೇದಾರನಾಥ ಬಳಿಯ ಗರುಡ ಚೆಟ್ಟಿ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಹೆಲಿಕಾಪ್ಟರ್ ಪತನಗೊಂಡು ಆರು ಮಂದಿ ಮೃತಪಟ್ಟಿದ್ದಾರೆ.
ಕೇದಾರನಾಥ ಕ್ಷೇತ್ರಕ್ಕೆ ಯಾತ್ರಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಕೇದಾರನಾಥ ಬಳಿಯ ಗರುಡ ಚೆಟ್ಟಿ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ.
ಇನ್ನು ಈ ಘಟನೆಯಲ್ಲಿ ಕೆಲವರು ಗಾಯಗೊಂಡಿರುವ ಶಂಕೆಯೂ ವ್ಯಕ್ತವಾಗಿದ್ದು, ಸದ್ಯ ರಕ್ಷಣಾ ಕಾರ್ಯಚರಣೆ ಮಾಡಲಾಗುತ್ತಿದೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.