ಭೋಪಾಲ್, ಅ 18 (DaijiworldNews/HR): ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯ ಅತ್ಖೋನಾ ಗ್ರಾಮದಲ್ಲಿ ಮೊಬೈಲ್ ಕಳ್ಳತನದ ಶಂಕೆಯ ಮೇಲೆ ಬಾಲಕನನ್ನು ವ್ಯಕ್ತಿಯೊಬ್ಬ ಬಾವಿಯೊಳಗೆ ನೇತಾಡಿಸಿರುವ ಘಟನೆ ನಡೆದಿದೆ.
ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹುಡುಗನು ತಾನು ಮುಗ್ಧನೆಂದು ಹೇಳಿಕೊಳ್ಳುತ್ತಿರುವುದು, ತನ್ನ ಪ್ರಾಣವನ್ನು ರಕ್ಷಿಸುವಂತೆ ಬೇಡಿಕೊಳ್ಳುತ್ತಿರುವುದು ಕಂಡುಬಂದಿದೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಶರ್ಮಾ, ಆರೋಪಿಯ ವಿರುದ್ಧ ನರಹತ್ಯೆ ಯತ್ನ ಹಾಗೂ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.