ಜಮ್ಮು, ಅ 19 (DaijiworldNews/HR): ಶೋಪಿಯಾನ್ ಜಿಲ್ಲೆಯ ಹೆರ್ಮೈನ್ ಪ್ರದೇಶದಲ್ಲಿ ಉತ್ತರಪ್ರದೇಶದಲ್ಲಿ ಗ್ರೆನೇಡ್ ದಾಳಿ ನಡೆಸಿ ಇಬ್ಬರು ವಲಸೆ ಕಾರ್ಮಿಕರನ್ನು ಕೊಂದಿದ್ದ ಭಯೋತ್ಪಾದಕ ಇಮ್ರಾನ್ ಬಶೀರ್ನನ್ನು ಭಧ್ರತಾ ಪಡೆ ಎನ್ಕೌಂಟರ್ ಮಾಡಿ ಹೊಡೆದುರುಳಿಸಿದೆ.
ವಲಸೆ ಕಾರ್ಮಿಕರ ಹತ್ಯೆಯಾದ 78 ಗಂಟೆಗಳ ನಂತರ ಶೋಪಿಯಾನ್ ನೌಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ ನಡೆದಿದ್ದು, ಅದರಲ್ಲಿ ಭಯೋತ್ಪಾದಕ ಹತನಾಗಿದ್ದಾನೆ.
ಇನ್ನು ಕಾಶ್ಮೀರಿ ಪಂಡಿತರ ಮೇಲೆ ಗುಂಡು ಹಾರಿಸಿದ ಸ್ಥಳ ಹತ್ತಿರದಲ್ಲೇ ಈ ಎನ್ಕೌಂಟರ್ ನಡೆದಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.