ಚಿತ್ರದುರ್ಗ, ಅ 19 (DaijiworldNews/HR): ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ವಿರುದ್ಧ ಚಿತ್ರದುರ್ಗ ಗ್ರಾಮೀಣ ಪೊಲೀಸರು ಬಾಲ ನ್ಯಾಯ ಕಾಯ್ದೆ 2015ನ್ನು ಉಲ್ಲಂಘಿಸಿದ್ದಕ್ಕಾಗಿ 3ನೇ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ನೀಡಿದ ದೂರಿನ ಮೇರೆಗೆ, ಪೊಲೀಸರು ಮಠಾಧೀಶರು, ಅಂದಿನ ಕಾರ್ಯದರ್ಶಿ ಪರಮಶಿವಯ್ಯ, ಹಾಸ್ಟೆಲ್ ವಾರ್ಡನ್ ರಶ್ಮಿ ಮತ್ತು ಮಡಿಲು ದತ್ತು ಕೇಂದ್ರದ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಇನ್ನು ನಾಲ್ಕೂವರೆ ವರ್ಷದ ಬಾಲಕಿ ಹಾಗೂ 16 ವರ್ಷದ ಮತ್ತೋರ್ವ ಬಾಲಕಿ, ಇಬ್ಬರು ಬಾಲಕಿಯರ ಬಗ್ಗೆ ಮಡಿಲು ಯೋಜನೆಗೆ ಮಾಹಿತಿ ನೀಡಿಲ್ಲ. ಮಹಿಳಾ-ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ರಕ್ಷಣಾ ಘಟಕಕ್ಕೂ ತಿಳಿಸಿಲ್ಲ. ಇದು ಬಾಲ ನ್ಯಾಯ ಕಾಯ್ದೆಯ ಉಲ್ಲಂಘನೆ ಎಂಬ ಆರೋಪ ಮಾಡಿದ್ದು, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಶ್ರೀಗಳ ವಿರುದ್ದ ದೂರು ನೀಡಿದ್ದಾರೆ.