ನವದೆಹಲಿ, ಅ 19 (DaijiworldNews/HR): ದೆಹಲಿಯಲ್ಲಿ ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ದೆಹಲಿಯಲ್ಲಿ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ಜನವರಿ 1 ರವರೆಗೆ ಸಂಪೂರ್ಣ ನಿಷೇಧಿಸಿದ್ದು, ಪಟಾಕಿ ಉತ್ಪಾದನೆ, ಶೇಖರಣೆ ಮತ್ತು ಮಾರಾಟಕ್ಕೆ 5,000 ರೂ.ವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9 ಬಿ ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದರು.
ಇನ್ನು ಪಟಾಕಿ ನಿಷೇಧವನ್ನು ನೋಡಿಕೊಳ್ಳಲು 408 ತಂಡಗಳನ್ನು ರಚಿಸಲಾಗಿದೆ ಎಂದು ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.