ನವದೆಹಲಿ, ಅ 20 (DaijiworldNews/HR): ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಾರಾಣಸಿ ಮತ್ತು ದೆಹಲಿಯ ಹಲವೆಡೆ ನಡೆಸಿದ್ದು, ಐಸಿಸ್ ಬೆಂಬಲಿತ ವ್ಯಕ್ತಿಯೊಬ್ಬನನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯನ್ನು ಬಸಿತ್ ಕಲಾಂ ಸಿದ್ದಿಕಿ ಎಂದು ಗುರುತಿಸಲಾಗಿದೆ.
ಬಸಿತ್ ಕಲಾಂ ಸಿದ್ದಿಕಿಯು ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸೇರಿ (ಐಸಿಸ್) ಯುವಕರನ್ನು ಬಳಸಿಕೊಂಡು ದೇಶದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದ ಎನ್ನಲಾಗಿದೆ.
ಇನ್ನು ದಾಳಿ ನಡೆಸಿರುವ ಎನ್ಐಎ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.