ಬೆಂಗಳೂರು, ಅ 20 (DaijiworldNews/HR): ಬೆಂಗಳೂರಿನಲ್ಲಿ ಬುಧವಾರ ಸುರಿದ ಮಳೆಯಿಂದಾಗಿ ಮೆಜೆಸ್ಟಿಕ್ ಬಳಿ ಕಂಪೌಂಡ್ ಗೋಡೆ ಕುಸಿದು ರಸ್ತೆಯಲ್ಲಿ ನಿಲ್ಲಿಸಿದ್ದ ಅನೇಕ ವಾಹನಗಳಿಗೆ ಹಾನಿಯಾಗಿದೆ.
ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಈಗಾಗಲೇ ನಗರದಲ್ಲಿ ಎಲ್ಲೋ ಅಲರ್ಟ್ ಘೋಷಿಸಿದ್ದು, ಮುಂದಿನ 5 ದಿನಗಳಲ್ಲಿ ಬೆಂಗಳೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿದ್ದು, ಸೋಮವಾರ ಸುರಿದ ಮಳೆಯ ನಂತರ ರಸ್ತೆಗಳು ಮತ್ತು ಬೈಲೇನ್ಗಳಿಂದ ನೀರು ಇನ್ನೂ ಕಡಿಮೆಯಾಗದ ಕಾರಣ ಅನೇಕ ಕಡೆಗಳಲ್ಲಿ ಜಲಾವೃತವಾಗಿದೆ.