ಮುಂಬೈ, ಅ 21 (DaijiworldNews/HR): ಒಳ ಚರಂಡಿಯನ್ನು ಸ್ವಚ್ಛಗೊಳಿಸುತ್ತಿದ್ದಾಗ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಪುಣೆಯ ವಾಘೋಲಿಯಲ್ಲಿರುವ ರೆಸಿಡೆನ್ಶಿಯಲ್ ಸೊಸೈಟಿಯೊಂದರಲ್ಲಿ ನಡೆದಿದೆ.
ಮೃತ ಕಾರ್ಮಿಕರನ್ನು ನಿತಿನ್ ಪ್ರಭಾರ್ ಗೊಂಡ್ (45 ವರ್ಷ), ಗಣೇಶ್ ಭಲೇರಾವ್ (28 ವರ್ಷ) ಹಾಗೂ ಸತೀಶ್ಕುಮಾರ್ ಚೌಧರಿ ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಮೂವರು ಕಾರ್ಮಿಕರು ಒಳಚರಂಡಿಯೊಳಗೆ ಪ್ರವೇಶಿಸಿದ್ದು, ಒಂದು ಗಂಟೆಯ ನಂತರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಕಾರ್ಮಿಕರು ಸ್ಪಂದಿಸದಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಇನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಮೂವರು ಕಾರ್ಮಿಕರ ಶವಗಳನ್ನು ಚರಂಡಿಯಿಂದ ಹೊರಗೆ ತೆಗೆದಿದ್ದಾರೆ.