ಬಳ್ಳಾರಿ, ಅ 21(DaijiworldNews/MS):ಬಳ್ಳಾರಿಯಲ್ಲಿ ನಡೆಯುತ್ತಿರುವ 'ಸಂಗಂ' ವಿಶ್ವ ಕವಿ ಸಮ್ಮೇಳನದಲ್ಲಿ 'ಮೋದಿ ಜಿಂದಾಬಾದ್' ಘೋಷಣೆ ಮೊಳಗಿದ ಕಾರಣ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ದಕ್ಷಿಣ ಕನ್ನಡದ ವಿಲ್ಸನ್ ಕಟೀಲ್ ಅವರು ‘ಸರ್ವಾಧಿಕಾರಿ ಪ್ರೀತಿಸಬೇಕಿತ್ತು‘ ಎಂಬ ಕವಿತೆಯ ವಾಚಿಸಿದರು. ಈ ವೇಳೆ ಕೆಲವರು ಎದ್ದು ನಿಂತು ಸರ್ವಾಧಿಕಾರಿ ಯಾರು ಎಂದು ಹೇಳಿ ಎಂದು ಪ್ರಶ್ನಿಸಿದರು. ಕೆಲವರು ಮೋದಿ ಜಿಂದಾಬಾದ್ ಎಂದರೆ, ಮತ್ತೆ ಕೆಲವರು ಪೋಯೆಟ್ರಿ ಜಿಂದಾಬಾದ್ ಎಂದು ಘೋಷಣೆ ಕೂಗಿದರು.
ಇಡೀ ಸಭಾಂಗಣದಲ್ಲಿ ಕೆಲವು ಕಾಲ ಗೊಂದಲದ ವಾತಾವರಣ ಹುಟ್ಟುಹಾಕಿತು.ಆಯೋಜಕರು ಗಲಾಟೆ ಮಾಡಿದವರ ತಂಡವನ್ನು ಸುಮ್ಮನಾಗಲು ಹೇಳಿದಾಗ, ಅವರೆಲ್ಲ ಕವಿಗೋಷ್ಠಿಯನ್ನು ಬಹಿಷ್ಕರಿಸಿ ಆಚೆಹೋದರು. ಗೋಷ್ಠಿ ಮತ್ತೆ ಮುಂದುವರಿಯಿತು.