ಪಾಟ್ನಾ, ಅ 22 (DaijiworldNews/HR): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೀ ಅವರೇ ನಿಮಗೆ ಬಿಜೆಪಿ ಜೊತೆ ಯಾವುದೇ ಸಂಬಂಧವಿಲ್ಲದಿದ್ದರೆ ನಿಮ್ಮ ಸಂಸದರನ್ನು ರಾಜ್ಯಸಭೆಯ ಉಪ ಸಭಾಪತಿ ಸ್ಥಾನವನ್ನು ತೊರೆಯುವಂತೆ ಹೇಳಿ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕಿಶೋರ್, ರಾಜ್ಯಸಭಾ ಉಪಸಭಾಪತಿಯಾಗಿರುವ ಕುಮಾರ್ ಅವರ ಪಕ್ಷದ ಜೆಡಿಯು ಸಂಸದರಾಗಿರುವ ಹರಿವಂಶ್ ನಾರಾಯಣ್ ಸಿಂಗ್ ಅವರನ್ನು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೇಳಿ ಎಂದು ಸವಾಲು ಹಾಕಿದ್ದಾರೆ.
ಇನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ಕಿಶೋರ್ ನಡುವೆ ಆರೋಪ-ಪ್ರತ್ಯಾರೋಪ ನಡೆಯುತ್ತಿದ್ದು, ಇಬ್ಬರೂ ಬಿಜೆಪಿಯೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಪರಸ್ಪರ ಆರೋಪ ಮಾಡುತ್ತಿದ್ದಾರೆ.