ಕಾರವಾರ, ಅ 22 (DaijiworldNews/HR): ಕಾರವಾರ ನಗರದ ಮೂರು ಕಡೆ ಭಾರತೀಯ ಕೋಸ್ಟ್ ಗಾರ್ಡ್ನ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಕ್ಕೆ ಯತ್ನಿಸಿದ್ದು, ಇದನ್ನು ಕಂಡ ಸ್ಥಳೀಯರು ಗಾಬರಿಗೊಂಡ ಘಟನೆ ನಡೆದಿದೆ.
ಭಾರತೀಯ ಕೋಸ್ಟ್ ಗಾರ್ಡ್ನ ಅಡ್ವಾನ್ಸ್ ಲೈಟ್ ಹೆಲಿಕಾಪ್ಟರ್ ಅನ್ನು ಕಾರವಾರ ನಗರದ ಮಾಲಾದೇವಿ ಮೈದಾನ, ಜಿಲ್ಲಾಧಿಕಾರಿ ಕಚೇರಿ ಎದುರಿಗಿನ ಫ್ಲೈ ಓವರ್ ಮೇಲೆ ಹಾಗೂ ಟ್ಯಾಗೋರ್ ಕಡಲ ತೀರದಲ್ಲಿ ಇಳಿಯಲು ಪ್ರಯತ್ನಿಸಿ ಮತ್ತೆ ತೆರಳಿದೆ. ಇದನ್ನು ಗಮನಿಸಿದ ಸ್ಥಳೀಯರು ಗಾಬರಿಯಾಗಿ ಮೊಬೈಲ್ನಲ್ಲಿ ಫೋಟೋ, ವಿಡಿಯೋ ಮಾಡಿಕೊಂಡಿದ್ದಾರೆ.
ಇನ್ನು ಈ ಬಗ್ಗೆ ಕೋಸ್ಟ್ ಗಾರ್ಡ್ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಇದೊಂದು ಟ್ರೈಯಲ್ ಅಷ್ಟೇ. ತುರ್ತು ಸಂಧರ್ಭದಲ್ಲಿ ಎಲ್ಲೆಲ್ಲಿ ಹೆಲಿಕಾಪ್ಟರ್ ಇಳಿಸಬಹುದೆಂದು ಪರಿಕ್ಷೀಸಲಾಗುತ್ತಿತ್ತು ಎಂದು ಹೇಳಿದ್ದು, ಬಳಿಕ ಗಾಬರಿಗೊಂಡ ಸ್ಥಳೀಯರು ನಿರಾಳರಾಗಿದ್ದಾರೆ.