ಕೊಯಮತ್ತೂರು, ಅ 23 (daijiworldNews/HR): ಕಾರಿನಲ್ಲಿದ್ದ ಸಿಲಿಂಟರ್ ಸ್ಫೋಟಗೊಂಡ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸುಟ್ಟು ಕರಕಲಾಗಿರುವ ಘಟನೆ ಕೊಯಮತ್ತೂರಿನ ಉಕ್ಕಡಂ ಬಳಿಯ ಕೊಟ್ಟೈಮೇಡುವಿನ ಈಶ್ವರನ್ ದೇವಸ್ಥಾನದ ಮುಂಭಾಗದಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ಸ್ಫೋಟದ ಶಬ್ದ ಕೇಳಿದ ಸಾರ್ವಜನಿಕರು ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಎರಡು ಸಿಲಿಂಡರ್ಗಳನ್ನು ಹೊಂದಿದ್ದ ಕಾರು ಚಲಿಸುತ್ತಿದ್ದ ವೇಳೆ ಸ್ಫೋಟಗೊಂಡಿದ್ದು, ಕಾರಿನಲ್ಲಿ ಯಾವುದೇ ಸುಡುವ ವಸ್ತುಗಳು ಇರಲಿಲ್ಲ. ಸಾವನ್ನಪ್ಪಿದ್ದ ವ್ಯಕ್ತಿ ಗುರುತು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ.