ಆಂಧ್ರಪ್ರದೇಶದ, ಅ 24 (DaijiworldNews/HR): ಪೂರ್ವ ಗೋದಾವರಿ ಜಿಲ್ಲೆಯ ಆಂಧ್ರಪ್ರದೇಶದ ರಾಜಮಹೇಂದ್ರವರಂನಲ್ಲಿ ಪಟಾಕಿ ತಯಾರಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ಕೋಟೇಶ್ವರ ರಾವ್ ಎಂದು ಗುರುತಿಸಲಾಗಿದೆ.
ಪಟಾಕಿ ತಯಾರಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಅಡುಗೆ ಅನಿಲ ಸಿಲಿಂಡರ್ ಕೂಡ ಸ್ಫೋಟಗೊಂಡ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದೆ.
ಇನ್ನು ಸ್ಫೋಟ ಸಂಭವಿಸಿದಾಗ ಕೋಟೇಶ್ವರ ರಾವ್ ಅವರು ಮನೆಯಲ್ಲಿ ಒಬ್ಬರೇ ಇದ್ದು, ಅವರ ಪತ್ನಿ ಮತ್ತು ಮಕ್ಕಳು ಹೊರಗಿದ್ದರು ಎನ್ನಲಾಗಿದೆ.