ಬೆಂಗಳೂರು, ಅ 25 (DaijiworldNews/MS): ಆಪರೇಷನ್ ಕಮಲದ ಮೂಲಕ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದ ಮಾಜಿ ಸಚಿವ ಹೆಚ್. ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಜೆಡಿಎಸ್ ತೊರೆದು ಕಮಲ ಹಿಡಿದ ವಿಶ್ವನಾಥ್ ಅವರು ವಿಧಾನಸಭೆ ಚುನಾವಣೆಗೆ ಸಮೀಪಿಸುತ್ತಿರುವ ಹೊತ್ತಲ್ಲೇ ಬಿಜೆಪಿ ಪಕ್ಷ ತೊರೆಯುವ ಸಾಧ್ಯತೆ ಹೆಚ್ಚಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆಯಾಗುವ ಕುರಿತು ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ವಿಶ್ವನಾಥ್ ಈ ಹಿಂದೆ ಕಾಂಗ್ರೆಸ್ನಿಂದ, ಜೆಡಿಎಸ್ಗೆ ಸೇರ್ಪಡೆಯಾಗಿದ್ದರು.
ಈ ಹಿಂದೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ಎಂಬ ಪ್ರಶ್ನೆಗೆ ಯಾರಿಗೆ ಗೊತ್ತು. ಸಂಜೆ ಮಳೆ ಬರಬಹುದು ವಾತಾವರಣವೂ ಬದಲಾಗಬಹುದು. ಒತ್ತಾಯ ಬಂದರೆ ಕಾಂಗ್ರೆಸ್ಗೂ ಹೋಗಬಹುದು. ಹೇಳಲಾಗುವುದಿಲ್ಲ. ಹೀಗೆ ಆಗಬೇಕು ಹಾಗೇ ಆಗಬೇಕು ಎಂಬ ನಿರ್ಣಯಗಳು ರಾಜಕಾರಣದಲ್ಲಿಲ್ಲ. ರಾಜಕಾರಣ ಈಗ ಯಾವ ರೀತಿಯಾಗಿದೆ ಎಂದು ನಾವು ವೋಟಿಗಾಗಿ ಏನನ್ನು ಬೇಕಾದರು ಮಾಡಬಹುದು ಎನ್ನುವ ಥರವಾಗಿದೆ ಎಂದಿದ್ದರು.
ಇದಲ್ಲದೆ ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ತಾವು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದನ್ನು ಈ ಹಿಂದೆಯೇ ಅಧಿಕೃತವಾಗಿ ಘೋಷಿಸಿದ್ದರು.