ಕೊಯಮತ್ತೂರು, ಅ 25 (daijiworldNews/HR): ಕೊಯಮತ್ತೂರಿನ ಉಕ್ಕಡಂ ದೇವಾಲಯದ ಬಳಿ ಭಾನುವಾರ ನಡೆದಿದ್ದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ಮುಹಮ್ಮದ್ ತಲ್ಕಾ, ಮುಹಮ್ಮದ್ ಅಜರುದ್ದೀನ್, ಮುಹಮ್ಮದ್ ರಿಯಾಜ್, ಫಿರೋಜ್ ಇಸ್ಮಾಯಿಲ್ ಮತ್ತು ಮುಹಮ್ಮದ್ ನವಾಜ್ ಇಸ್ಮಾಯಿಲ್ ಎಂದು ಅವರನ್ನು ಗುರುತಿಸಲಾಗಿದೆ.
ಭಾನುವಾರ ಮುಂಜಾನೆ ಜೆಮಿಶಾ ಮುಬೀನ್ ಅವರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಸಿಲಿಂಡರ್ ಸ್ಫೋಟವಾಗಿ ಮುಬೀನ್ ಮೃತಪಟ್ಟಿದ್ದರು. ಬಾಂಬ್ಗಳನ್ನು ತಯಾರಿಸಲು ಬಳಸುವ ಪೊಟ್ಯಾಸಿಯಮ್ ನೈಟ್ರೇಟ್ನಂತಹ ವಸ್ತುಗಳು ಕಾರಿನಲ್ಲಿ ಪತ್ತೆಯಾಗಿದ್ದವು.
ಘಟನೆಯ ಕುರಿತು ಉಕ್ಕಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರನ್ನು ಬಂಧಿಸಲಾಗಿದೆ.