ಅರುಣಾಚಲ ಪ್ರದೇಶ, ಅ 25 (daijiworldNews/HR): ನಹರ್ಲಗುನ್ ನ ಮಾರುಕಟ್ಟೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 700 ಕ್ಕೂ ಹೆಚ್ಚು ಅಂಗಡಿಗಳು ಬೂದಿಯಾಗಿದ್ದು, ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳವು ನಹರಲಗುನ್ ಅಗ್ನಿಶಾಮಕ ಇಲಾಖೆ ಕಚೇರಿಯಿಂದ ಸುಮಾರು 20 ಮೀಟರ್ ದೂರದಲ್ಲಿದ್ದರೂ, ಅಧಿಕಾರಿಗಳು ತಕ್ಷಣಕ್ಕೆ ಸೇವೆ ಒದಗಿಸುವಲ್ಲಿ ವಿಳಂಬ ಮಾಡಿದರು. ಬೆಂಕಿ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂದು ನಹರ್ಲಗುನ್ ಬಜಾರ್ ಸಮಿತಿ ಅಧ್ಯಕ್ಷೆ ಕಿರ್ಪಾ ನಾಯ್ ಆರೋಪಿಸಿದ್ದಾರೆ.
ಇನ್ನು ಅಂಗಡಿಯವರು ಅಗ್ನಿಶಾಮಕ ದಳದ ನಿರ್ಲಕ್ಷ್ಯದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದಿಂದ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.