ಭೋಪಾಲ್, ಅ 26 (DaijiworldNews/DB): ವೇಗವಾಗಿ ಬಂದ ರೈಲು ಢಿಕ್ಕಿ ಹೊಡೆದು ರೈಲ್ವೇ ಸುರಕ್ಷತಾ ಪೊಲೀಸರಿಬ್ಬರು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಹೆಡ್ ಕಾನ್ಸ್ಟೇಬಲ್ಗಳಾದ ಅಶೋಕ್ ಕುಮಾರ್ (56) ಮತ್ತು ನವರಾಜ್ ಸಿಂಗ್ (40) ಮೃತ ದುರ್ದೈವಿಗಳು. ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ. ಮೊರೆನಾದಿಂದ ಏಳು ಕಿಮೀ ದೂರದಲ್ಲಿರುವ ಸಾಂಕ್ ರೈಲು ನಿಲ್ದಾಣದಲ್ಲಿ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಗ್ವಾಲಿಯರ್-ಆಗ್ರಾ ಪ್ಯಾಸೆಂಜರ್ ರೈಲು ಹಳಿಯನ್ನು ರೈಲು ಮಧ್ಯದಲ್ಲಿ ನಿಂತು ರೈಲ್ವೇ ರಕ್ಷಣಾ ಪಡೆಯ ಇಬ್ಬರು ಹೆಡ್ ಕಾನ್ಸ್ಟೇಬಲ್ಗಳು ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ದೆಹಲಿಯಿಂದ ವೇಗವಾಗಿ ಬಂದ ಡ್ಯುರಂಟೋ ಎಕ್ಸ್ಪ್ರೆಸ್ ರೈಲು ಇಬ್ಬರು ಹೆಡ್ ಕಾನ್ಸ್ಟೇಬಲ್ಗಳಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಮೊರೆನಾ ಆರ್ಪಿಎಫ್ ಪೊಲೀಸ್ ಠಾಣೆಯ ಉಸ್ತುವಾರಿ ಹರಿಕಿಶನ್ ಮೀನಾ ತಿಳಿಸಿದ್ದಾರೆ.
ಪಕ್ಕದ ಹಳಿಯಲ್ಲಿ ಗೂಡ್ಸ್ ರೈಲು ನಿಂತಿದ್ದರಿಂದಾಗಿ ಇಬ್ಬರು ಅಧಿಕಾರಿಗಳಿಗೆ ಓಡಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರಿಗೆ ರೈಲು ಢಿಕ್ಕಿ ಹೊಡೆದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ವರದಿಯಾಗಿದೆ.