ಬೆಂಗಳೂರು, ಅ 26 (DaijiworldNews/MS): 2023ರ ಚುನಾವಣೆ ತಯಾರಿಗೆ ಜೆಡಿಎಸ್ ಚುರುಕು ಮುಟ್ಟಿಸಿದ್ದು, ಇದೇ ಹಿನ್ನಲೆಯಲ್ಲಿ ನ.1ರಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ನ ಪಂಚರತ್ನ ರಥಯಾತ್ರೆಯು ನ.1ರಂದು ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಆರಂಭವಾಗಲಿದೆ. ಅದೇ ಮಾವೇಶದಲ್ಲಿ ಜೆಡಿಎಸ್ನ ಮೊದಲ ಪಟ್ಟಿ ರಿಲೀಸ್ ಮಾಡಲಾಗುತ್ತದೆ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಜೆಪಿ ಭವನದಲ್ಲಿ ಮಾತನಾಡಿದ ಅವರು, "ಈಗಾಗಲೇ 123 ಕ್ಷೇತ್ರಗಳ ಅಭ್ಯರ್ಥಿಗಳು ಅಂತಿಮವಾಗಿದ್ದಾರೆ. ಕಳೆದ ವಾರ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಪೂಜೆ ಸಲ್ಲಿಸಲಾಗಿದೆ. ಪಂಚರತ್ನದ ಮೊದಲ ದಿನ ಅಧಿಕೃತವಾಗಿ ಪಟ್ಟಿ ಬಿಡುಗಡೆ ಆಗಲಿದೆ. ಅಲ್ಲದೆ ಕಾಂಗ್ರೆಸ್ ,ಬಿಜೆಪಿಗಿಂತ ನಮ್ಮ ಪಂಚರತ್ನ ರಥಯಾತ್ರೆ ವಿಶೇಷವಾಗಿ ಇರಲಿದೆ ಎಂದು ಹೇಳಿದ್ದಾರೆ.