ಶಿವಮೊಗ್ಗ, ಅ 26 (DaijiworldNews/SM): ಹರ್ಷನ ಕಳಕೊಂಡು 8 ತಿಂಗಳು ಆಗಿದೆ. ಇದೀಗ ಪ್ರೇಮಸಿಂಗ್ ಚೂರಿ ಇರಿತ ಸೇರಿದಂತೆ ಪ್ರಕರಣ ನಡೆಯುತ್ತಲೇ ಇದ್ದು, ಬಿಜೆಪಿ ಸರಕಾರ ಇದ್ರೂ ಕೂಡ ನಮಗೆ ರಕ್ಷಣೆ ಇಲ್ಲವೇ ಎಂದು ಹರ್ಷ ಸಹೋದರಿ ಅಶ್ವಿನಿ ಅಸಮಾಧಾನ ಹೊರ ಹಾಕಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರದಲ್ಲೂ, ರಾಜ್ಯದಲ್ಲೂ ಬಿಜೆಪಿ ಸರಕಾರ ಆಡಳಿತದಲ್ಲಿದೆ. ಮೇಲಾಗಿ ಶಿವಮೊಗ್ಗದಲ್ಲೂ ಬಿಜೆಪಿ ಇದೆ. ನಮಗೆ ರಕ್ಷಣೆ ಯಾವಾಗ ಸಿಗುತ್ತದೆ ಎಂದು ಹರ್ಷ ಸಹೋದರಿ ಅಶ್ವಿನಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಹಿಂದುತ್ವದ ಕೆಲಸ ಮಾಡುತ್ತಿದ್ದ ಎಂದು ಹರ್ಷನ ಟಾರ್ಗೆಟ್ ಮಾಡಿ ಹೊಡೆದರು. ಹರ್ಷ ಸತ್ತಾಗ ಪ್ರತಿಯೊಬ್ಬರೂ ಬಂದು ನಾವಿದ್ದೇವೆ ಎಂದರು. ಆದರೆ, ಇಲ್ಲಿಯ ತನಕ ಯಾವುದೇ ನ್ಯಾಯ ನಮ್ಮ ಕುಟುಂಬಕ್ಕೆ ಸಿಕ್ಕಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ನಾಳೆ ನಾವು ಸತ್ತಾಗಲೂ ಇದನ್ನೇ ಹೇಳುತ್ತಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಹರ್ಷನ ಸಹೋದರಿ ಕಿಡಿಕಾರಿದ್ದಾರೆ.