ಮೈಸೂರು, ಅ 27 (DaijiworldNews/MS): ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ BQ.1 ತಳಿಯ ಪ್ರಕರಣ ವರದಿಯಾಗಿದ್ದು, ಈ ಹಿನ್ನಲೆಯಲ್ಲಿ ಜನತೆ ಮೂರನೇ ಡೋಸ್ ಹಾಕಿಸಿಕೊಳ್ಳಲು ಆರೋಗ್ಯ ಸಚಿವ ಡಾ.ಸುಧಾಕರ್ ಮನವಿ ಮಾಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವರು, ಸದ್ಯ ಯಾವುದೇ ಆತಂಕ ಇಲ್ಲದಿದ್ದರೂ ರಾಜ್ಯ ಆರೋಗ್ಯ ಇಲಾಖೆ ಕೆಲವು ವಿಚಾರಗಳ ಮೇಲೆ ಎಚ್ಚರಿಕೆ ವಹಿಸುತ್ತಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಒಂದು ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆ ಗಡಿ ಜಿಲ್ಲೆಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಕಟ್ಟೆಚ್ಚರ ವಹಿಸುವಂತೆ ಗಡಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ
ಕೋವಿಡ್ 19ನ ಬಿಎ. 2.75 ಹಾಗೂ ಬಿಜೆ.1 ನ ಪುರ್ನಸಂಯೋಜಿತ , ಓಮಿಕ್ರಾನ್ BQ.1 ಹೊಸ ಉಪ ರೂಪಾಂತರಿ ಪ್ರಕರಣ ಮಹಾರಾಷ್ಟ್ರದಲ್ಲಿ ಪತ್ತೆಯಾಗಿದ್ದು ಜನತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಎರಡು ಡೋಸ್ ಲಸಿಕೆಗಳನ್ನು ತೆಗೆದುಕೊಂಡವರು, ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟವರು ಹೆಚ್ಚಿನ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದ್ದಾರೆ.