ಬೆಂಗಳೂರು, ಅ 27 (DaijiworldNews/MS): ಕರ್ನಾಟಕ ಮಹಿಳಾ ಕಾಂಗ್ರೆಸ್ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಅಧ್ಯಕ್ಷರ ಸ್ಥಾನದಿಂದ ಡಾ.ಪುಷ್ಪಾ ಅಮರನಾಥ್ ಅವರನ್ನು ತೆಗೆದುಹಾಕುವಂತೆ ಮಹಿಳಾ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ಪುಷ್ಪಾ ಅಮರನಾಥ್ ವಿರುದ್ಧ, ಇಂದು ಪೋಸ್ಟರ್ ಹಿಡಿದು ಬಂದ ಮಹಿಳಾ ಕಾರ್ಯಕರ್ತರು ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಪ್ರಾಮಾಣಿಕರಿಗೆ ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರಿಗೂ ಮಾಹಿತಿ ನೀಡದೆ ಪುಷ್ಪಾ ಅಮರನಾಥ್ ಕೆಲ ದಿನಗಳ ಹಿಂದೆ ಏಕಾಏಕಿ ಜಿಲ್ಲಾ ಘಟಕಗಳ ಜಿಲ್ಲಾಧ್ಯಕ್ಷರನ್ನ ಬದಲಾಯಿಸಿದ್ದಾರೆ ಎಂಬ ಆರೋಪ ಅವರ ಮೇಲಿದೆ.
ಈ ಬೆಳವಣಿಗೆಯ ಹಿನ್ನಲೆ ಪುಷ್ಪಾ ಅಮರನಾಥ್ ಅವರನ್ನು ಕೆಳಗಿಳಿಸುವಂತೆ ಆಗ್ರಹಿಸಿದ್ದಾರೆ.