ನವದೆಹಲಿ, ಅ 28 (DaijiworldNews/HR): ಕರೆನ್ಸಿ ನೋಟುಗಳಲ್ಲಿ ಲಕ್ಷ್ಮಿ ಮತ್ತು ಗಣೇಶನ ಚಿತ್ರಗಳಿರಬೇಕು ಎಂಬ ತಮ್ಮ ಬೇಡಿಕೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಹೊಸ ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡುವಂತೆ ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದ ಕೇಜ್ರಿವಾಲ್, ಇದು ದೇಶದ ಆರ್ಥಿಕ ಸಂಕಷ್ಟಗಳಿಂದ ಸಹಾಯ ಮಾಡುತ್ತದೆ ಎಂದು ಸಲಹೆ ನೀಡಿದ್ದಾರೆ.
ಇನ್ನು ಮಹಾತ್ಮಾ ಗಾಂಧಿಯವರೊಂದಿಗೆ ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮಿ ದೇವಿ ಮತ್ತು ಗಣೇಶನ ಚಿತ್ರಗಳನ್ನು ಹಾಕಬೇಕು ಎಂದು 130 ಕೋಟಿ ಭಾರತೀಯರ ಪರವಾಗಿ ವಿನಂತಿಸುತ್ತಿದ್ದೇನೆ ಎಂದು ಹೇಳಿದ್ದಾರೆ.